ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ: ನೀರಸ ಪ್ರತಿಕ್ರಿಯೆ

Update: 2018-06-08 04:51 GMT

ಮಂಗಳೂರು, ಜೂ.8: ಭಾರತ ಚುನಾವಣಾ ಆಯೋಗದ ಅಧಿಸೂಚನೆಯಂತೆ ಕನಾಟಕ ನೈರುತ್ಯ ಪದವೀಧರ/ಶಿಕ್ಷಕರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ಕ್ರಮವಾಗಿ ಪದವೀಧರ ಕ್ಷೇತ್ರಕ್ಕಾಗಿ 23 ಮತಗಟ್ಟೆಗಳು ಮತ್ತು ಶಿಕ್ಷಕರ ಕ್ಷೇತ್ರಕ್ಕಾಗಿ 14 ಮತಗಟ್ಟೆಗಳನ್ನು ಅಳವಡಿಸಲಾಗಿದ್ದು, ಮಳೆಯಿಂದಾಗಿ ಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬಹುದು. ಅಲ್ಲದೆ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದವರು ಅಧಿಕೃತ ದಾಖಲೆಗಳಲ್ಲಿ ಯಾವುದಾದರೊಂದನ್ನು ಮತಗಟ್ಟೆಯಲ್ಲಿ ಹಾಜರುಪಡಿಸಿ, ಮತದಾನ ಮಾಡಬಹುದಾಗಿದೆ.

ಪದವೀಧರರ ಕ್ಷೇತ್ರ ಮತಗಟ್ಟೆಗಳು 

ಮುಲ್ಕಿ-ನಗರ ಪಂಚಾಯತ್ ಕಟ್ಟಡ, ಮೂಡುಬಿದಿರೆ-ಪುರಸಭೆ ಕಟ್ಟಡ (2 ಮತಗಟ್ಟೆ), ಸುರತ್ಕಲ್-ಗೋವಿಂದದಾಸ ಕಾಲೇಜು (2 ಮತಗಟ್ಟೆ), ಬಜಪೆ-ಪಂಚಾಯತ್ ಕಟ್ಟಡ, ಗುರುಪುರ- ಸರಕಾರಿ ಪದಪೂರ್ವ ಕಾಲೇಜು, ಹಂಪನಕಟ್ಟೆ-ಯುನಿವರ್ಸಿಟಿ ಕಾಲೇಜು ಮಂಗಳೂರು-(5 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೊಣಾಜೆ, ಬಬ್ಬುಕಟ್ಟೆ-ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಮಿನಿ ವಿಧಾನ ಸೌಧ ತಾಲೂಕು ಕಟ್ಟಡ (3 ಮತಗಟ್ಟೆ), ಬೆಳ್ತಂಗಡಿ-ತಾಲೂಕು ಕಚೇರಿ (2 ಮತಗಟ್ಟೆ), ಪುತ್ತೂರು-ತಾಲೂಕು ಪಂಚಾಯತ್ ಕಚೇರಿ (2 ಮತಗಟ್ಟೆ), ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿ.

ಶಿಕ್ಷಕರ ಕ್ಷೇತ್ರ ಮತಗಟ್ಟೆಗಳು

ಮುಲ್ಕಿ-ನಗರ ಪಂಚಾಯತ್, ಮೂಡುಬಿದಿರೆ-ಪುರಸಭೆ ಕಟ್ಟಡ, ಸುರತ್ಕಲ್-ಗೋವಿಂದದಾಸ ಕಾಲೇಜು, ಬಜಪೆ-ಪಂಚಾಯತ್ ಕಟ್ಟಡ, ಗುರುಪುರ-ಸರಕಾರಿ ಪದಪೂರ್ವ ಕಾಲೇಜು, ಮಂಗಳೂರು-ಯುನಿವರ್ಸಿಟಿ ಕಾಲೇಜು ಮಂಗಳೂರು-(2 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲು, ಬಬ್ಬುಕಟ್ಟೆ- ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಸಾಮರ್ಥ್ಯ ಸೌಧ ತಾಲೂಕು ಪಂಚಾಯತ್ ಕಟ್ಟಡ, ಬೆಳ್ತಂಗಡಿ-ತಾಲೂಕು ಕಚೇರಿ, ಪುತ್ತೂರು-ತಾಲೂಕು ಪಂಚಾಯತ್ ಕಚೇರಿ, ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿಯಲ್ಲಿ ಮತದಾನ ನಡೆಯುತ್ತಿದೆ.

ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು

ಅರುಣ್ ಕುಮಾರ್-ಜನತಾದಳ(ಜಾತ್ಯಾತೀತ), ಅಯನೂರು ಮಂಜುನಾಥ್-ಭಾರತೀಯ ಜನತಾ ಪಾರ್ಟಿ, ಎಸ್.ಪಿ. ದಿನೇಶ್- ಕಾಂಗ್ರೆಸ್, ಜಿ.ಸಿ. ಪಟೇಲ್-ಸರ್ವ ಜನತಾ ಪಾರ್ಟಿ, ಜಫರುಲ್ಲಾ ಸತ್ತಾರ್ ಖಾನ್-ಪಕ್ಷೇತರ, ಜಿ.ಎಂ. ಜಯಕುಮಾರ್-ಪಕ್ಷೇತರ, ಬಿ.ಕೆ. ಮಂಜುನಾಥ-ಪಕ್ಷೇತರ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು

ಕ್ಯಾ. ಗಣೇಶ್ ಕಾರ್ಣಿಕ್- ಭಾರತೀಯ ಜನತಾ ಪಾರ್ಟಿ, ಎಸ್.ಎಲ್. ಬೋಜೆಗೌಡ- ಜನತಾದಳ (ಜಾತ್ಯಾತೀತ), ಕೆ.ಕೆ. ಮಂಜುನಾಥ ಕುಮಾರ್ (ಮಾಸ್ಟರ್)- ಕಾಂಗ್ರೆಸ್, ಡಾ.ಅರುಣ್ ಹೊಸಕೊಪ್ಪ- ಪಕ್ಷೇತರ, ಅಲೋಶಿಯಸ್ ಡಿಸೋಜ- ಪಕ್ಷೇತರ, ಕೆ.ಬಿ. ಚಂದ್ರೋಜಿ ರಾವ್- ಪಕ್ಷೇತರ, ಡಿ.ಕೆ. ತುಳಸಪ್ಪ- ಪಕ್ಷೇತರ, ಅಂಪಾರ ನಿತ್ಯಾನಂದ ಶೆಟ್ಟಿ- ಪಕ್ಷೇತರ, ಪ್ರಭುಲಿಂಗ ಬಿ.ಆರ್.- ಪಕ್ಷೇತರ, ಬಸವರಾಜಪ್ಪ ಕೆ.ಸಿ. - ಪಕ್ಷೇತರ, ಎಂ. ರಮೇಶ-ಪಕ್ಷೇತರ, ರಾಜೇಂದ್ರ ಕುಮಾರ್ ಕೆ.ಪಿ. -ಪಕ್ಷೇತರ.

ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಸಿರುವ ಎಲ್ಲಾ ಮತದಾರರು ವಿವರಗಳನ್ನು ವೆಬ್‌ಸೈಟ್ dk.nic.in ನಲ್ಲಿ ಪರಿಶೀಲಿಸಿ, ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಸಹಾಯಕ ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ/ಶಿಕ್ಷಕರ ಕ್ಷೇತ್ರ ಹಾಗೂ ದ.ಕ. ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News