ನಾನು ಏಕಾಂಗಿಯಲ್ಲ: ಎಂ.ಬಿ. ಪಾಟೀಲ್
Update: 2018-06-08 08:15 GMT
ಬೆಂಗಳೂರು, ಜೂ.8: ‘‘ನಾನು ಯಾವುದೇ ಕಾರಣಕ್ಕೂ ಏಕಾಂಗಿಯಲ್ಲ. ಪಕ್ಷ ನನ್ನನ್ನು ಕೈಬಿಟ್ಟರೂ ನಾನು ಪಕ್ಷವನ್ನು ಬಿಡುವುದಿಲ್ಲ. ನನಗೆ 15 ರಿಂದ 20 ಶಾಸಕರ ಬೆಂಬಲವಿದೆ. ಎಲ್ಲರ ಜೊತೆ ಕುಳಿತು ಚರ್ಚೆ ಮಾಡಿ ಪಕ್ಷದ ಚೌಕಟ್ಟಿನಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆೆ’’ ಎಂದು ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಹೇಳಿದ್ದಾರೆ.
ಸಮ್ಮಿಶ್ರ ಸರಕಾರದ ಮೊದಲ ಹಂತದ ಸಂಪುಟ ರಚನೆ ವೇಳೆ ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಎಂಬಿ ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಚಿವ ಸ್ಥಾನ ವಂಚಿತರಾದ ಕಾಂಗ್ರೆಸ್ ಶಾಸಕರ ಜೊತೆ ಸತತ ಸಭೆ ನಡೆಸಿದ್ದರು.
ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಡಿಕೆ ಶಿವಕುಮಾರ್ ಹಾಗೂ ಆರ್ವಿ ದೇಶಪಾಂಡೆ ಅವರು ಎಂಬಿ ಪಾಟೀಲ್ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸಲು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕೂಡ ಪಾಟೀಲ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.