ಮುಂಬೈ ಕೋಟೆ ಪ್ರದೇಶದಲ್ಲಿ ಭೀಕರ ಬೆಂಕಿ ಅವಘಡ

Update: 2018-06-09 04:04 GMT

ಮುಂಬೈ, ಜೂ.9: ಇಲ್ಲಿನ ಕೋಟೆ ಪ್ರದೇಶದ ಪಟೇಲ್ ಚೇಂಬರ್ಸ್‌ನಲ್ಲಿ ಶನಿವಾರ ಮುಂಜಾನೆ ಭೀಕರ ಬೆಂಕಿ ದುರಂತ ಸಂಭವಿಸಿದೆ.

18ಕ್ಕೂ ಹೆಚ್ಚು ಅಗ್ನಿಶಾಮಕ ಎಂಜಿನ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿವೆ. ಈ ನಡುವೆ ಬೆಂಕಿಯಿಂದಾಗಿ ಕಟ್ಟಡ ಕುಸಿದಾಗ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ಹತ್ತು ದಿನಗಳಲ್ಲಿ ಕೋಟೆ ಪ್ರದೇಶದಲ್ಲಿ ಸಂಭವಿಸುತ್ತಿರುವ ಎರಡನೇ ಭೀಕರ ಅಗ್ನಿದುರಂತ ಇದಾಗಿದೆ. ದಕ್ಷಿಣ ಮುಂಬೈನ ಸಿಂಧ್ಯಾ ಹೌಸ್‌ನಲ್ಲಿ ಕಳೆದ ಶುಕ್ರವಾರ ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿತ್ತು. ಯಾವುದೇ ಜೀವಹಾನಿ ಸಂಭವಿಸಿಲ್ಲ. ಸಿಕ್ಕಿಹಾಕಿಕೊಂಡಿದ್ದ ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News