ಉಡುಪಿ: ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Update: 2018-06-11 18:00 GMT

ಉಡುಪಿ, ಜೂ.11:ಕರ್ನಾಟಕ ಸಾಹಿತ್ಯ ಅಕಾಡೆಮಿಯು 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2017 ಜ.1ರಿಂದ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2017 ಎಂದು ಮುದ್ರಿತವಾಗಿರಬೇಕು. ಪ್ರಕಟವಾದ ಪುಸ್ತಕ ಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ರಿಜಿಸ್ಟರ್ಡ್ ಅಂಚೆ /ಕೊರಿಯರ್ ಮೂಲಕ ಜೂ.25ರೊಳಗೆ ತಲುಪುವಂತೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News