"ಓಟುಗಳಿಗೆ ಬೇಡುವವರು ಮಾತ್ರ ಇಫ್ತಾರ್ ಕೂಟ ಆಯೋಜಿಸುತ್ತಾರೆ" ಎಂದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

Update: 2018-06-12 10:08 GMT

ಹೈದರಾಬಾದ್, ಜೂ.12: “ಓಟುಗಳಿಗಾಗಿ ಬೇಡುವವರು ಮಾತ್ರ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತಾರೆ” ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಹೈದರಾಬಾದ್ ನ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

“ಓಟುಗಳಿಗಾಗಿ ಬೇಡುವವರು ಮಾತ್ರ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತಾರೆ. ನಾನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ” ಎಂದು ರಾಜಾ ಸಿಂಗ್ ಹೇಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

“ತೆಲಂಗಾಣ ರಾಷ್ಟ್ರ ಸಮಿತಿ ಇಂತಹ ಕೂಟಗಳನ್ನು ಆಯೋಜಿಸುವುದರಲ್ಲಿದೆ. ದೇಶದಲ್ಲಿ ಉಗ್ರವಾದ ಹರಡಲು ‘ಹಸಿರು ಪುಸ್ತಕ’ ಕಾರಣವಾಗಿದೆ” ಎಂದೂ ಅವರು ವಿಡಿಯೋದಲ್ಲಿ ಹೇಳಿದ್ದರು.

ಈ ಬಗ್ಗೆ ಫಲಕ್ನುಮಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News