ನಾಳೆ ಜಯನಗರ ಕ್ಷೇತ್ರ ಫಲಿತಾಂಶ

Update: 2018-06-12 15:14 GMT

ಬೆಂಗಳೂರು, ಜೂ.12: ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಜೂ.13 ರಂದು ಇಲ್ಲಿನ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಬೆಳಗ್ಗೆ 7ರಿಂದ ನಡೆಯಲಿದೆ.

ಮತಯಂತ್ರಗಳನ್ನು ಪೊಲೀಸರ ಕಣ್ಗಾವಲಿನಲ್ಲಿ ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಸೀಲ್‌ಮಾಡಿ ಇಡಲಾಗಿದೆ. ಜೂ.13ರ ಬೆಳಗ್ಗೆ 7 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನ 12ರೊಳಗೆ ಫಲಿತಾಂಶ ಹೊರ ಬೀಳಲಿದೆ.

ಬಿಜೆಪಿ ಮಾಜಿ ಶಾಸಕ ಬಿ.ಎನ್.ವಿಜಯ್‌ಕುಮಾರ್ ನಿಧನದಿಂದ ಈ ಚುನಾವಣೆಯನ್ನು ಮುಂದೂಡಲಾಗಿತ್ತು. ಬಿಜೆಪಿಯಿಂದ ವಿಜಯ್‌ಕುಮಾರ್ ಸಹೋದರ ಪ್ರಹ್ಲಾದ್ ಬಾಬು, ಕಾಂಗ್ರೆಸ್‌ನಿಂದ ಮಾಜಿ ಮಂತ್ರಿ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಹಾಗೂ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ನಡುವೆ ತೀವ್ರ ಸ್ಪರ್ಧೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News