ಗೌರಿ ಹತ್ಯೆಗೂ ನನಗೂ ಸಂಬಂಧವಿಲ್ಲ: ಹಿಂದೂ ಜನಜಾಗೃತಿ ಸಮಿತಿ ರಾಜ್ಯವಕ್ತಾರ ಮೋಹನ್‌ ಗೌಡ

Update: 2018-06-13 10:36 GMT

ಬೆಂಗಳೂರು, ಜೂ.12: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಾನು ಪಾತ್ರದಾರಿ ಎಂದು ಬಿಂಬಿಸಲಾಗುತ್ತಿದೆ. ಆದರೆ, ಆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸುವ ಪಿತೂರಿ ನಡೆಯುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯವಕ್ತಾರ ಮೋಹನ್ ಗೌಡ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಮದ್ದೂರಿನ ಹಿಂದೂ ಯುವ ಸೇನೆಯ ಕೆ.ಟಿ.ನವೀನ್ ಕುಮಾರ್ 'ಹಿಂದೂ ಜನಜಾಗೃತಿ ಸಮಿತಿಯ ಮೋಹನ್‌ಗೌಡ ಮೂಲಕ ಗೌರಿಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರವೀಣ್ ಪರಿಚಯವಾಗಿದ್ದು, ತನ್ನ ಮನೆಗೆ ಬಂದು ಬುಲೆಟ್‌ಗಳನ್ನು ಕೊಂಡೊಯ್ದಿದ್ದ ಎಂದು ಎಸ್‌ಐಟಿಗೆ ಹೇಳಿಕೆ ನೀಡಿದ್ದಾರೆ. ಆದರೆ, ಪ್ರವೀಣ್ ಕುಮಾರ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ನನ್ನ ಮೂಲಕ ಹಿಂದೂ ಸಂಘಟನೆ ಮೇಲೆ ಗೂಬೆ ಕೂರಿಸಲು ಈ ರೀತಿ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು

ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ವಕೀಲ ಎನ್.ಪಿ.ಅಮೃತೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News