ಮಡಿಕೇರಿ: ಲಾರಿ ಢಿಕ್ಕಿಯಾಗಿ ಪಾದಾಚಾರಿ ಮೃತ್ಯು
Update: 2018-06-14 20:05 IST
ಮಡಿಕೇರಿ, ಜೂ.14: ಅಪರಿಚಿತ ಲಾರಿ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕಾಟಕೇರಿಯಲ್ಲಿ ನಡೆದಿದೆ. ಮೃತರನ್ನು ಸುಳ್ಯದ ನಿವಾಸಿ ಬಾಬು ಎಂದು ಗುರುತಿಸಲಾಗಿದೆ.
ಬಾಬು ಅವರು ಕಾಟಕೇರಿ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಲಾರಿಯೊಂದು ಅವರಿಗೆ ಢಿಕ್ಕಿಯಾಗಿ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಬು ಅವರನ್ನು ಸ್ಥಳೀಯರು ಮಡಿಕೇರಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.