ಹೊಟ್ಟೆಕಿಚ್ಚಿಗೆ ಮದ್ದಿಲ್ಲ: ಟೀಕಾಕಾರರಿಗೆ ಸಚಿವೆ ಜಯಮಾಲಾ ತಿರುಗೇಟು

Update: 2018-06-14 16:30 GMT

ಬೆಂಗಳೂರು, ಜೂ. 14: ಪ್ರಪಂಚದಲ್ಲಿ ಎಲ್ಲ ರೋಗಗಳಿಗೂ ಮದ್ದು ಕಂಡು ಹಿಡಿಯಲಾಗಿದೆ. ಆದರೆ, ಹೊಟ್ಟೆಕಿಚ್ಚಿಗೆ ಯಾವುದೇ ಮದ್ದು ಕಂಡುಹಿಡಿದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ತಿರುಗೇಟು ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನೂ 90ರ ದಶಕದಿಂದಲೂ ರಾಜಕೀಯದಲ್ಲಿದ್ದೇನೆ. ಓದಿರುವುದು ರಾಜ್ಯಶಾಸ್ತ್ರದಲ್ಲಿ ಎಂ.ಎ., ನನಗೂ ರಾಜಕೀಯ ಗೊತ್ತಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ತಾನು ಎಲ್ಲ ರೀತಿಯ ಸಾಧನೆಗಳನ್ನು ಮಾಡಿಯೇ ಈ ಹಂತಕ್ಕೆ ಬಂದಿದ್ದೇನೆ. ನನಗೂ ಸಾಕಷ್ಟು ಅನುಭವವಿದೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ ನನಗೆ ಆದರ್ಶ. ವಿಧಾನ ಪರಿಷತ್ ಸಭಾ ನಾಯಕಿಯಾಗಿಯೂ ನಿಭಾಯಿಸುವ ಸಾಮರ್ಥ್ಯ ನನಗಿದೆ ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News