​ರೈತರ ಸಾಲ ಮನ್ನಾಕ್ಕೆ ಬದ್ಧ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-06-15 15:33 GMT

ಬೆಂಗಳೂರು, ಜೂ. 15: ರಾಜ್ಯದಲ್ಲಿನ ರೈತರ ಸಾಲಮನ್ನಾಕ್ಕೆ ಬದ್ಧ ಎಂದು ಪುನರುಚ್ಚರಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಆಶ್ವಾಸನೆ ನೀಡಿದ್ದಾರೆ.

ಶುಕ್ರವಾರ ಈ ಬಗ್ಗೆ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಣೆ ನೀಡಿರುವ ಅವರು, ‘ರೈತರ ಬಾಂಧವರೇ ಸಾಲಮನ್ನಾ ಬಗ್ಗೆ ಯಾವುದೇ ಗೊಂದಲ ಬೇಡ. ಸಾಲಮನ್ನಾ ಮಾಡಲು ನಾನು ಬದ್ಧನಾಗಿದ್ದೇನೆ. ನಾನು ಈ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಿದ್ದು, ಶೀಘ್ರದಲ್ಲೇ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News