ಮಡಿಕೇರಿ : ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

Update: 2018-06-16 13:34 GMT
ಸಾಂದರ್ಭಿಕ ಚಿತ್ರ

ಮಡಿಕೇರಿ, ಜೂ.16 : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಾಜಪೇಟೆ ಸಮೀಪದ ಕುಕ್ಲೂರು ಗ್ರಾಮದಲ್ಲಿ ನಡೆದಿದೆ.

ಕುಕ್ಲೂರು ಗ್ರಾಮದ ಮಾಳೇಟಿರ ಎಸ್.ಕರುಂಬಯ್ಯ (38) ಎಂಬುವವರೇ ಮೃತ ವ್ಯಕ್ತಿ. ಶನಿವಾರ ಬೆಳಗ್ಗೆ 5.30 ಗಂಟೆಗೆ ಮನೆಯಲ್ಲಿ ತಾಯಿಯ ಬಳಿ ನೀರು ಕೇಳಿ ಕುಡಿದು, ಬಳಿಕ ಮನೆಯಲ್ಲಿದ್ದ ಬಂದೂಕಿನಿಂದ ಕುತ್ತಿಗೆ ಭಾಗಕ್ಕೆ ಗುಂಡು ಹೊಡೆದುಕೊಂಡು ಕರುಂಬಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ಕರುಂಬಯ್ಯ ಅವರು ಅವಿವಾಹಿತರಾಗಿದ್ದು, ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News