ದೇಶಾದ್ಯಂತ ಈದುಲ್ ಫಿತ್ರ್ ಆಚರಣೆ: ಪ್ರಧಾನಿ, ರಾಷ್ಟ್ರಪತಿಯಿಂದ ಶುಭಾಶಯ

Update: 2018-06-16 14:05 GMT

ಹೊಸದಿಲ್ಲಿ,ಜೂ.16: ಶನಿವಾರ ದೇಶಾದ್ಯಂತ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

ದಿಲ್ಲಿಯ ಜಾಮಾ ಮಸೀದಿಯಲ್ಲಿ ಬೆಳಿಗ್ಗೆ ಪ್ರಾರ್ಥನೆಗಾಗಿ ಸಾವಿರಾರು ಮುಸ್ಲಿಮರು ಸೇರಿದ್ದರು. ಆದರೆ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ನಿರಂತರ ಕದನ ವಿರಾಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಅತ್ತಾರಿ-ವಾಘಾ ಗಡಿಯಲ್ಲಿ ಈದ್ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ಭದ್ರತಾ ಪಡೆಗಳು ಪರಸ್ಪರ ಸಿಹಿಯನ್ನು ವಿನಿಮಯಿಸಿಕೊಳ್ಳಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News