ರೈತರ ಸಾಲಮನ್ನಾ ಜಾರಿಯಲ್ಲಿ ಅನುಮಾನವಿಲ್ಲ : ಜೇಡರಹಳ್ಳಿ ಕೃಷ್ಣಪ್ಪ

Update: 2018-06-16 16:13 GMT

ಮದ್ದೂರು, ಜೂ.16: ರೈತರ ಸಾಲಮನ್ನಾ ಯೋಜನೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಾರಿಗೊಳಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಜೇಡರಹಳ್ಳಿ ಕೃಷ್ಣಪ್ಪ ಹೇಳಿದರು.

ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಂಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ರಾಜ್ಯದ ರೈತರು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗವುದು ಬೇಡ ಎಂದರು.

ಸಮ್ಮಿಶ್ರ ಸರಕಾರವಾದ ಕಾರಣ ಕಾಂಗ್ರೆಸ್ ಪಕ್ಷದವರನ್ನು ಈ ವಿಷಯದಲ್ಲಿ ಗಣನೆಗೆ ತೆಗೆದುಕೊಳ್ಳಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವಲ್ಪ ಕಾಲಾವಾಕಾಶ ನೀಡಿದರೆ, ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾರೆಂದು ಅವರು ತಿಳಿಸಿದರು.

ರಾಜ್ಯ ಉಪಾದ್ಯಕ್ಷ ಕೃಷ್ಣಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವೈದ್ಯನಾಥಪುರ ಕೆಂಪೇಗೌಡ, ಗ್ರಾಪಂ ಅಧ್ಯಕ್ಷ ಯೋಗೇಶ್, ಸದಸ್ಯ ಯು.ಎಸ್.ರವೀಗೌಡ, ಮುಖಂಡರಾದ ಎಸ್.ವಿ.ಟಿ. ರಾಮಚಂದ್ರು, ದೇವು, ಕಾಳೀರಯ್ಯ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News