ವಿನಯ್ ಕುಲಕರ್ಣಿ ಸೋಲು ಬೇಸರ ತರಿಸಿದೆ: ಎಚ್.ಡಿ.ರೇವಣ್ಣ

Update: 2018-06-17 13:44 GMT

ಧಾರವಾಡ, ಜೂ.17: ಉತ್ತರ ಕರ್ನಾಟಕ ಭಾಗದಲ್ಲಿ ಪ್ರಮುಖ ನಾಯಕರಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋಲು ಬೇಸರ ತರಿಸಿದೆ. ಇದೆಲ್ಲ ರಾಜಕಾರಣದಲ್ಲಿ ಸಹಜವಾಗಿದ್ದು, ಧೃತಿಗೆಡುವ ಅಗತ್ಯವಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.

ರವಿವಾರ ಇಲ್ಲಿನ ಜಯನಗರದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ನಾವು ಒಂದೇ ಕುಟುಂಬದವರಿದ್ದಂತೆ. ಧಾರವಾಡಕ್ಕೆ ಬಂದಾಗ ವಿನಯ್ ಕುಲಕರ್ಣಿ ಅವರನ್ನು ಭೇಟಿ ಮಾಡಬೇಕೆಂದು ಅಂದುಕೊಂಡಿದ್ದೆ. ಅದರಂತೆ ಭೇಟಿ ಮಾಡಿ ಕುಶಲೋಪರಿ ಮಾತನಾಡಿದ್ದೇವೆಂದು ತಿಳಿಸಿದರು.

ಜೆಡಿಎಸ್ ನಾಯಕರಾದ ಬಸವರಾಜ ಹೊರಟ್ಟಿ, ಕೋನರೆಡ್ಡಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು. ರೈತರ ಸಮಸ್ಯೆಗಳ ಬಗ್ಗೆ ಬೀದಿಗಿಳಿದು ಅವರು ಹೋರಾಟ ನಡೆಸಿ ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಬಸವರಾಜ್ ಹೊರಟ್ಟಿ 30 ವರ್ಷಗಳ ಕಾಲ ಶಿಕ್ಷಣ ಇಲಾಖೆಯ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅವರಿಗೆ ಸಮ್ಮಿಶ್ರ ಸರಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಅಗತ್ಯವಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News