ಉಪವಾಸ ನಿರತ ಮನೀಷ್ ಸಿಸೋಡಿಯಾ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Update: 2018-06-18 15:25 GMT

ಹೊಸದಿಲ್ಲಿ, ಜೂ.18: ದಿಲ್ಲಿಯ ಲೆಫ್ಟಿನೆಂಟ್ ಜನರಲ್ ಅವರ ನಿವಾಸದಲ್ಲಿ ಜೂನ್ 13ರಿಂದ ಉಪವಾಸ ನಿರತರಾಗಿರುವ ದಿಲ್ಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ತಮ್ಮೊಂದಿಗೆ ಉಪವಾಸ ನಿರತರಾಗಿದ್ದ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೂಡಾ ಅಸ್ವಸ್ಥರಾಗಿದ್ದು, ಅವರನ್ನೂ ರವಿವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿರುವ ಕೇಜ್ರಿವಾಲ್, ಪ್ರಧಾನಿ ಮೋದಿ ತಕ್ಷಣ ಮಧ್ಯಪ್ರವೇಶಿಸಿ ಐಎಎಸ್ ಅಧಿಕಾರಿಗಳು ತಮ್ಮ ಮುಷ್ಕರ ಹಿಂಪಡೆಯುವಂತೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News