​ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2018-06-18 16:38 GMT

ಮಂಗಳೂರು, ಜೂ. 18: ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟಿರುವ ಘಟನೆ ರವಿವಾರ ರಾತ್ರಿ ಬಿಕರ್ನಕಟ್ಟೆ ಬಳಿ ಸಂಭವಿಸಿದೆ.

ಮೃತರನ್ನು ಬಡಗ ಎಡಪದವು ನಿವಾಸಿ ಜಯಂತ್ ಗೌಡ (54) ಎಂದು ಗುರುತಿಸಲಾಗಿದೆ.

ಬಿಕರ್ನಕಟ್ಟೆಯಲ್ಲಿ ಮೇಲ್ಸೇತುವೆ ಬಳಿ ಜಯಂತ್ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದೀಪಕ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ತಲೆ ಹಿಂಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News