ಲಾರಿ ಮುಷ್ಕರ...

Update: 2018-06-18 18:19 GMT

ಡೀಸೆಲ್ ದರ ಏರಿಕೆ, ಥರ್ಡ್ ಪಾರ್ಟಿ ಪ್ರೀಮಿಯಂ ದರ ಏರಿಕೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಾರಿ ಮಾಲಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಲಾರಿ ಮುಷ್ಕರದಿಂದಾಗಿ ಹೊರಗಡೆಯಿಂದ ನಗರಕ್ಕೆ ಆಗಮಿಸುತ್ತಿದ್ದ ಲಾರಿಗಳ ಪೈಕಿ ಶೇ.90 ರಷ್ಟು ಸಂಪೂರ್ಣ ಸ್ಥಗಿತಗೊಂಡಿದ್ದವು. ಇಂದು ಅದು ಮುಂದುವರಿಯಲಿದ್ದು, ಅಕ್ಕಿ, ಗೋಧಿ, ತರಕಾರಿ ಸೇರಿದಂತೆ ವಿವಿಧ ದಿನನಿತ್ಯ ಬಳಕೆ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor