ವಿಟ್ಲ: ವಿಜಯೋತ್ಸವ ವೇಳೆ ಘರ್ಷಣೆ; ಇಬ್ಬರು ಆರೋಪಿಗಳು ಸೆರೆ
Update: 2018-06-19 15:01 GMT
ಬಂಟ್ವಾಳ, ಜೂ. 19: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚಿಸಿದ ಸಂದರ್ಭ ವಿಜಯೋತ್ಸವ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕರೋಪಾಡಿ ಗ್ರಾಮದ ವಿನೋದ್ ಶೆಟ್ಟಿ ಹಾಗೂ ಅಶ್ವಥ್ ಬಂಧಿತರು ಎಂದು ಗುರುತಿಸಲಾಗಿದೆ.
ಮೈತ್ರಿ ಸರ್ಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಭಾಗದಲ್ಲಿ ಕೆಲವು ಕಡೆಗಳಲ್ಲಿ ವಿಜಯೋತ್ಸವ ಆಚರಿಸಲಾಗಿತ್ತು. ಈ ಸಂದರ್ಭ ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ನೂರು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಕರೋಪಾಡಿ ಗ್ರಾಮದ ಕುಡ್ಪಲ್ತಡ್ಕ ಎಂಬಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.