ಪದ್ಮ ಮೂಲ್ಯ ಅನಿಲಡೆ

Update: 2018-06-19 16:02 GMT

ಬಂಟ್ವಾಳ, ಜೂ. 19: ಹಿರಿಯ ಕಾಂಗ್ರೆಸಿಗ, ಉದ್ಯಮಿ, ಪ್ರಗತಿಪರ ಕೃಷಿಕ, ಲಯನ್ಸ್‌ಕ್ಲಬ್ ಮಾಜಿ ಅಧ್ಯಕ್ಷ ಕುಕ್ಕಳ ಗ್ರಾಮದ ಅನಿಲಡೆ ನಿವಾಸಿ ಪದ್ಮ ಮೂಲ್ಯ (70) ಅಸೌಖ್ಯದಿಂದ ಸೋಮವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

 ಪದ್ಮ ಮೂಲ್ಯ ಅವರು ಬಸವನಗುಡಿ ಶ್ರೀಗಣೇಶ್ ವುಡ್ ಇಂಡಸ್ಟ್ರೀಸ್ ಮಾಲಕರಾಗಿದ್ದರು. ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಮಡಂತ್ಯಾರು-ಪುಂಜಾಲಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪಾರೆಂಕಿ ಗ್ರಾಮದ ಬಂಗೇರಕಟ್ಟೆ ಶ್ರೀಮಾರಿಗುಡಿಯ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಬಸವನಗುಡಿ ಶ್ರೀಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಸಮಿತಿ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಸಮಿತಿಯ ಅಧ್ಯಕ್ಷರಾಗಿದ್ದರು. ಮಡಂತ್ಯಾರು ಫ್ರೆಂಡ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾಗಿ ಕೆಸರುಗದ್ದೆ ಹಗ್ಗಜಗ್ಗಾಟ ಸ್ಪರ್ಧೆ ನಡೆಸಿದ್ದರು. ತಾಲೂಕಿನಲ್ಲಿ ಪ್ರಥಮವಾಗಿ ಮ್ಯಾಂಜಿಯಂ ಸಸ್ಯ ಕೃಷಿ ಮಾಡಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ಲೇಖನ ಪುಸ್ತಕ ವಿತರಣೆ, ಧಾರ್ಮಿಕ, ಸಾಂಸ್ಕತಿಕ, ಕ್ರೀಡಾ ಪೋಷಕರಾಗಿದ್ದರು. 

ಸಂತಾಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಗಂಗಾಧರ ಗೌಡ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ