ಹನೂರು: ನೂತನ ಸಾರಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ
Update: 2018-06-19 16:18 GMT
ಹನೂರು,ಜೂ.19: ಚಾಮರಾಜನಗರ ಜಿಲ್ಲೆಯ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಮಹಮ್ಮದ್ ಅಮೀನ್ ಮತ್ತು ಹನೂರು ಟೌನ್ ಜೆಡಿಎಸ್ ಪಕ್ಷದ ನೂತನ ಯುವ ಘಟಕದ ಅಧ್ಯಕ್ಷರಾಗಿ ಪ್ರಸನ್ನಕುಮಾರ್ ರವರು ಆಯ್ಕೆಯಾಗಿದ್ದಾರೆ.
ಪಕ್ಷದ ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ತೀಯಾಜ್ ಪಾಷ ಮತ್ತು ಚಾಮರಾಜಗರ ತಾಲೂಕು ಅಧ್ಯಕ್ಷ ರಘುರಾಮ್ ನೂತನವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು .