ಸುಂಟಿಕೊಪ್ಪ: ಕಾರು- ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

Update: 2018-06-19 17:07 GMT

ಸುಂಟಿಕೊಪ್ಪ,ಜೂ.18: ಶಾಂತಿಗೇರಿ ತೋಟದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಎಂದಿನಂತೆ ಕೆಲಸವನ್ನು ಮುಗಿಸಿ ಸುಂಟಿಕೊಪ್ಪದಿಂದ ನಾಕೂರು ಶಿರಂಗಾಲ ಗ್ರಾಮದ ಮಳೂರು ನಿವಾಸಿ ವಾಸು ಎಂಬುವವರ ಪುತ್ರ ಆನಂದ ಮನೆಗೆ ತೆರಳುತ್ತಿದ್ದ ಸಂದರ್ಭ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ವಿಪ್ಟ್ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಿಂದ ಅನತಿ ದೂರಕ್ಕೆ ಬಿದ್ದ ಪರಿಣಾಮ ಬೈಕು ಸವಾರನ ಕಿವಿ, ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆನಂದನನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News