ಬಸ್ ಪಾಸ್ ನೀಡಿ

Update: 2018-06-19 18:36 GMT

ವಾನ್ಯರೇ,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಬಜೆಟ್ ಸಂದರ್ಭದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಪ್ರಕಟಿಸಿದ್ದರು. ಆದರೆ ಈ ಭರವಸೆ ಈಗ ಕೇವಲ ಕಾಗದಕ್ಕೆ ಸಿಮೀತವಾಗಿದೆಯೇ ವಿನಃ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ.

ರಾಜ್ಯದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವುದರಿಂದ ಬಡ ಪೋಷಕರಿಗೆ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಿ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಲು ಸಹಕಾರಿಯಾಗುತ್ತದೆ. ಆದರೆ ಈಗಿನ ಸಮ್ಮಿಶ್ರ ಸರಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಹಿಂದೆ ಮುಂದೆ ನೋಡುವುದು ವಿದ್ಯಾರ್ಥಿಗಳು ಆತಂಕಪಡುವಂತಾಗಿದೆ. ಆದ್ದರಿಂದ ಮುಖ್ಯಮಂತ್ರಿಯವರು ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಪರಾಂಬರಿಸಿ ಬಸ್ ಪಾಸ್ ವ್ಯವಸ್ಥೆ ಮಾಡಲು ಮುಂದಾಗುವರೇ.
 

Writer - ರಾಮು ಎಲ್.ಪಿ, ಲಕ್ಕವಳ್ಳಿ

contributor

Editor - ರಾಮು ಎಲ್.ಪಿ, ಲಕ್ಕವಳ್ಳಿ

contributor

Similar News