ಬೆಂಜನಪದವು: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

Update: 2018-06-20 10:16 GMT

ಬಂಟ್ವಾಳ, ಜೂ. 20: ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವು ಸಮೀಪದ ರಬ್ಬಲ್ ತೋಟದಲ್ಲಿ ಬುಧವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಉಲಾಯಿಬೆಟ್ಟು ಗ್ರಾಮದ ಕಳ್ಳಿಗೆ ನಿವಾಸಿ ನಾರಾಯಣ ಮೂಲ್ಯ ಎಂಬವರ ಪುತ್ರ ಯಶವಂತ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಚೇತನ್ ಎಂಬವರು ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News