ಮೆಲ್ಕಾರ್: ಬುಡ ಸಮೇತ ಮಗುಚಿ ಬಿದ್ದ ಮರ

Update: 2018-06-20 11:47 GMT

ಬಂಟ್ವಾಳ, ಜೂ. 20: ಅಶ್ವಥ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಸಮೀಪದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಉತ್ತರ ಪ್ರದೇಶದ ಉನಾವ್ ಜಿಲ್ಲೆಯ ಸಫೀಪುರ, ಪಿಕಿ ಗ್ರಾಮ ನಿವಾಸಿ ರಾಮಸೇವಕ್ (36) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ಮತ್ತೋರ್ವ ಕಾರ್ಮಿಕ ದಿಲೀಪ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಬ್ಬರು ಮೆಲ್ಕಾರ್ ಸಮೀಪದ ಖಾಸಗಿ ಜಾಗವೊಂದರಲ್ಲಿ ಸಿಮೆಂಟ್ ಆಕೃತಿ ಕೆಲಸ ಮಾಡುತ್ತಿದ್ದಾಗ, ಬುಧವಾರ ಸಂಜೆ ಬೀಸಿದ ಗಾಳಿ ಮಳೆಗೆ ಪಕ್ಕದಲ್ಲಿದ್ದ ಬೃಹತ್ ಮರ ಬುಡ ಸಮೇತ ಮಗುಚಿ ಕೆಲಸ ಮಾಡುತ್ತಿದ್ದ ಟೆಂಟ್ ಮೇಲೆ ಬಿದ್ದಿದೆ. ಪರಿಣಾಮ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಾಮಸೇವಕ್  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಸ್ಥಳಕ್ಕೆ ಪೊಲೀಸ್ ಹಾಗೂ ಅಗ್ನಿ ಶಾಮಕ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರ ಕಟಾವು ಕಾರ್ಯ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News