ಬೆಳ್ತಂಗಡಿ: ಸಿದ್ದರಾಮಯ್ಯರನ್ನು ಭೇಟಿಯಾದ ರಮಾನಾಥ ರೈ
Update: 2018-06-20 20:08 IST
ಬಂಟ್ವಾಳ, ಜೂ. 20: ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಭೇಟಿ ಮಾಡಿದರು.
ಈ ಸಂದರ್ಭ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರೈ, ಕೆಲ ಕಾಲ ಮಾತುಕತೆ ನಡೆಸಿದರು.