ಬೆಳ್ತಂಗಡಿ: ಸಿದ್ದರಾಮಯ್ಯರನ್ನು ಭೇಟಿಯಾದ ವೀರೇಂದ್ರ ಹೆಗ್ಗಡೆ, ಸಚಿವ ಪುಟ್ಟರಾಜು

Update: 2018-06-20 17:41 GMT

ಬೆಳ್ತಂಗಡಿ, ಜೂ. 20: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಸಾಧಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಚಿವ ಪುಟ್ಟರಾಜು ಶಾಂತಿವನಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕುಶಲೋಪರಿ ನಡೆಸಿದರು.

ಸಣ್ಣ ನೀರಾವರಿ ಸಚಿವ ಸಿ. ಎಸ್. ಪುಟ್ಟರಾಜು ಅವರು ಬುಧವಾರ ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ನಂತರ ಶಾಂತಿವನದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ಮಾಜಿ ಶಾಸಕ ವಸಂತ ಬಂಗೇರ, ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಮುಖ್ಯ ವೈದಾಧಿಕಾರಿ ಡಾ ಪ್ರಶಾಂತ್ ಶೆಟ್ಟಿ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ ಐ. ಶಶಿಕಾಂತ್ ಜೈನ್ ಮೊದಲಾದವರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News