ಜೂ. 29: ಸದ್ಭಾವನಾ ವೇದಿಕೆ ಉಳ್ಳಾಲ ವತಿಯಿಂದ 'ಈದ್ ಸೌಹಾರ್ದ ಕೂಟ'

Update: 2018-06-21 09:44 GMT

ತೊಕ್ಕೊಟ್ಟು, ಜೂ. 21: ಸದ್ಭಾವನಾ ವೇದಿಕೆ ಉಳ್ಳಾಲ ಇದರ ವತಿಯಿಂದ ಜೂ. 29ರಂದು ಸಂಜೆ 4:30ಕ್ಕೆ ಕೊಲ್ಯ ಗಟ್ಟಿ ಸಮಾಜ ಭವನದಲ್ಲಿ 'ಈದ್ ಸೌಹಾರ್ದ ಕೂಟ' ನಡೆಯಲಿದೆ.

ಸದ್ಭಾವನಾ ವೇದಿಕೆ ಉಳ್ಳಾಲ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಅಧ್ಯಕ್ಷತೆ ವಹಿಸುವರು. ಸಚಿವ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಇಲ್ಲಿನ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಬಬ್ಬುಕಟ್ಟೆ ನಿತ್ಯಾಧರ್ ಚರ್ಚ್ ಫಾ. ಎಲಿಯಾಸ್ ಡಿಸೋಜ, ತೊಕೊಟ್ಟು ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಅವರು ಈ ಸಂದರ್ಭ ಸೌಹಾರ್ದ ಸಂದೇಶ ನೀಡಲಿದ್ದಾರೆ ಎಂದು ಸದ್ಭಾವನಾ ವೇದಿಕೆಯ ಗೌರವಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಜೋಸ್ಲಿನ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅನ್ವರ್ ಕಲ್ಲಾಪು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News