ಕಿತ್ತೂರಿನ ಯೋಧ ಹೃದಯಾಘಾತದಿಂದ ಮೃತ್ಯು

Update: 2018-06-23 08:21 GMT

ಬೆಳಗಾವಿ, ಜೂ.23: ಅಹ್ಮದಾಬಾದ್‌ನಲ್ಲಿ ಕರ್ತವ್ಯದಲ್ಲಿದ್ದ ಬೆಳಗಾವಿ ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮ ನಿವಾಸಿ ಶಶಿಧರ ಶಿವಪುತ್ರಪ್ಪಗುರವೈನವರ(39) ಮೃತಪಟ್ಟ ಯೋಧ. ಕಳೆದ 20 ವರ್ಷಗಳಿಂದ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದ ಶಶಿಧರ ಅವರು ನಿನ್ನೆ ರಾತ್ರಿ 10 ಗಂಟೆಗೆ ಅಹ್ಮದಾಬಾದ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

1998ರಲ್ಲಿ ಸೇವೆಗೆ ಆಯ್ಕೆಯಾಗಿದ್ದ ಶಶಿಧರ ಅವರು ಅಹ್ಮದಾಬಾದ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 9 ವರ್ಷಗಳ ಹಿಂದೆ ವಿವಾಹವಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೃತದೇಹವು ಇಂದು ಸಂಜೆ ಗ್ರಾಮಕ್ಕೆ ಕರೆತರಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News