ಬೆಂಗಳೂರು: ಆಟೊ ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ

Update: 2018-06-23 12:43 GMT

ಬೆಂಗಳೂರು, ಜೂ.23: ಮದ್ಯದ ಅಮಲಿನಲ್ಲಿ ಕ್ಲುಲಕ ವಿಚಾರಕ್ಕೆ ಮೂವರು ಆಟೊ ಚಾಲಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನಿಗೆ ಮಾರಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ ನಡೆಸಿರುವ ದುರ್ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಾಗಶೆಟ್ಟಿಯಲ್ಲಿಯ ಮಂಜುನಾಥ್(26) ಎಂಬುವರು ಗಾಯಗೊಂಡಿರುವ ಆಟೊ ಚಾಲಕನಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ: ಆಟೊ ಚಾಲಕರಾಗಿದ್ದ ಮಂಜುನಾಥ್, ಶಶಿ ಹಾಗೂ ಮಂಜು ಎಂಬುವರು ಶುಕ್ರವಾರ ರಾತ್ರಿ 9:30ರ ಸುಮಾರಿಗೆ ನಗರದ ಪಟೇಲಮ್ಮ ಲೇಔಟ್‌ನ ರೈಲ್ವೆಹಳಿ ಬಳಿ ಮದ್ಯಪಾನ ಮಾಡಿದ ನಂತರ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್‌ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಪ್ರಕರಣ ದಾಖಲಿಸಿಕೊಂಡಿರುವ ಸಂಜಯನಗರ ಪೊಲೀಸರು, ಕೃತ್ಯವೆಸಗಿದ ಶಶಿ ಹಾಗೂ ಮಂಜು ಎಂಬುವರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News