ನನಗೆ ಜೀವ ಬೆದರಿಕೆ ಇದೆ ಎಂದ ಶಾಸಕ ಚವ್ಹಾಣ್

Update: 2018-06-23 13:11 GMT

ಬೆಂಗಳೂರು/ವಿಜಯಪುರ, ಜೂ. 23: ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಸಾಹುಕಾರ್‌ರಿಂದ ನನಗೆ ಜೀವ ಬೆದರಿಕೆ ಕರೆ ಬಂದಿತ್ತು ಎಂದು ವಿಜಯಪುರದ ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ್ ತಿಳಿಸಿದ್ದಾರೆ.

ಶನಿವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಚುನಾವಣಾ ಪೂರ್ವ ಹಾಗೂ ನಂತರ ಸಾಕಷ್ಟು ಬೆದರಿಕೆ ಕರೆಗಳು ಬಂದಿವೆ. ಚಡಚಣ ಭಾಗದಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೆ. ಅದೇ ಕಾರಣಕ್ಕೆ ನನಗೆ ಬೆದರಿಕೆ ಕರೆ ಬಂದಿತ್ತು ಎಂದು ಹೇಳಿದರು.
ನನಗೆ ಬೆದರಿಕೆ ಕರೆ ಬಂದ ಬಗ್ಗೆ ಅಂದಿನ ಎಸ್ಪಿ ಕುಲದೀಪ್ ಕುಮಾರ್ ಜೈನ್ ಅವರಿಗೆ ತಿಳಿಸಿದ್ದೆ. ಶಾಸಕನಾದ ಮೇಲೆ ಈಗಿನ ಎಸ್ಪಿ ಅವರಿಗೂ ಸೂಕ್ತ ಭದ್ರತೆ ಒದಗಿಸಲು ಮನವಿ ಮಾಡಿದ್ದೆ. ಆದರೆ, ಇದುವರೆಗೂ ನನಗೆ ಸೂಕ್ತ ಭದ್ರತೆ ನೀಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಧರ್ಮರಾಜ್ ಚಡಚಣ ಎನ್‌ಕೌಂಟರ್ ನಕಲಿ. ಹೀಗಾಗಿ ಈ ಕುರಿತು ತನಿಖೆಗೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ಚಡಚಣ ಭಾಗದಲ್ಲಿ ಈ ಹಿಂದೆ ನಡೆದ ನರಮೇಧ ಪ್ರಕರಣಗಳ ಮರು ತನಿಖೆ ನಡೆಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News