ವಿದ್ವತ್ ಮೇಲಿನ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್

Update: 2018-06-23 13:42 GMT

ಬೆಂಗಳೂರು, ಜೂ.23: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಆದೇಶಿಸಿದೆ.

ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ನ್ಯಾಯಾಧೀಶ ವೆಂಕಟೇಶ್ ಪ್ರಸನ್ನ ಶನಿವಾರ ತೀರ್ಪು ಪ್ರಕಟಿಸಿದರು. ಆರೋಪಿಗಳಾದ ಮಂಜುನಾಥ್, ಮುಹಮ್ಮದ್ ಅಶ್ರಫ್, ಮುಹಮ್ಮದ್ ನಾಸಿರ್, ಅರುಣ್ ಬಾಬು ಮ್ತು ಬಾಲಕೃಷ್ಣಗೆ ಜಾಮೀನು ಸಿಕ್ಕಿದೆ.

ಫೆ. 19 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳಿಗೆ ಸದ್ಯಕ್ಕೆ ಜೈಲು ವಾಸದಿಂದ ಮುಕ್ತಿ ಸಿಕ್ಕಿದೆ. ಪ್ರಮುಖ ಆರೋಪಿ ಮುಹಮ್ಮದ್ ನಲಪಾಡ್ ಹಾರಿಸ್ ಮತ್ತು ಇನ್ನೊಬ್ಬ ಆರೋಪಿ ಅಭಿಷೇಕ್‌ಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ದಾಖಲಾಗಿ ತನಿಖೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News