ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ: ಚಾಲಕರಿಬ್ಬರಿಗೆ ಗಾಯ
Update: 2018-06-23 14:13 GMT
ಬಂಟ್ವಾಳ, ಜೂ. 23: ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಲಾರಿ ಚಾಲಕರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ಶನಿವಾರ ಸಂಭವಿಸಿದೆ.
ಲಾರಿ ಚಾಲಕ, ಬೆಂಗಳೂರಿನ ನಿವಾಸಿಗಳಾದ ಚಂದ್ರ ಶೇಖರ್ ಹಾಗೂ ಗಂಗಾ ಚೆನ್ನಯ್ಯ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಲಾರಿಗೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಪರಿಣಾಮ ಲಾರಿ ಚಾಲಕರಿಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಎರಡೂ ವಾಹನಗಳು ಜಖಂಗೊಂಡಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.