ಕೊಪ್ಪಳ: ವಿದ್ಯುತ್ ಆಘಾತಕ್ಕೆ ಇಬ್ಬರು ಬಲಿ; ಮೂವರಿಗೆ ಗಾಯ
Update: 2018-06-24 06:28 GMT
ಕೊಪ್ಪಳ, ಜೂ. 24: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವೆಂಕಟಗಿರಿ ಗ್ರಾಮದ ಹನುಮಂತಪ್ಪ ಗಂಜಿ (40), ಮೆಹಬೂಬ್ ಸಾಬ (28) ಎಂದು ಗುರುತಿಸಲಾಗಿದೆ.
ಹಿರೇಬೆಣಕಲ್ ಗ್ರಾಮದ ಸುಬ್ಬರಾವ್ ಎಂಬವರ ಜಮೀನಿನ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದ್ದು, ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಬ್ಬರು ಬಲಿಯಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.