ಮಂಗಳೂರು: ಅಕ್ರಮ ಮರಳು ದಾಸ್ತಾನು ಅಡ್ಡೆಗೆ ದಾಳಿ; 80 ಲೋಡ್‌ ಮರಳು ವಶ

Update: 2018-06-24 15:26 GMT

ಮಂಗಳೂರು, ಜೂ. 24: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಿರುವೈಲ್ ಗ್ರಾಮದ ದೇವರಪದವು ಖಾಸಗಿ ಸ್ಥಳದಲ್ಲಿ ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪೊಲೀಸರು ಪತ್ತೆ ಹಚ್ಚಿ, ಸುಮಾರು 80 ಲೋಡ್‌ನಷ್ಟು ಮರಳನ್ನು ರವಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ  ನಿರೀಕ್ಷಕರು, ಸಿಬ್ಬಂದಿ ಜೊತೆ ಜಂಟಿಯಾಗಿ ದಾಳಿ ಮಾಡಿದ್ದರು.

ವಶಕ್ಕೆ ಪಡೆದಿರುವ ಮರಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ವಿಭಾಗದ ಉಪ-ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯನ್ನು ನಗರದ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್‌ ಮಾರ್ಗದರ್ಶನದಲ್ಲಿ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News