ಉಡುಪಿ: ಮೋರಿಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Update: 2018-06-24 16:05 GMT

ಉಡುಪಿ, ಜೂ.24: ದೊಡ್ಡಣ್ಣಗುಡ್ಡೆ ತೋಟಗಾರಿಕಾ ಇಲಾಖೆಯ ನರ್ಸರಿ ಬಳಿ ಆಕಸ್ಮಿಕವಾಗಿ ಆಯತಪ್ಪಿಮೋರಿಗೆ ಬಿದ್ದು ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಜಯ ಶೇರಿಗಾರ್(45) ಎಂದು ಗುರುತಿಸಲಾಗಿದೆ. ಇವರು ಜೂ. 22ರಂದು ರಾತ್ರಿ 10.30ರ ವೇಳೆ ಆಯ ತಪ್ಪಿ ಮೋರಿಯ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಜೂ.23ರಂದು ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News