ಅನ್ವರ್ ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಿ: ಜೆಡಿಎಸ್ ರಾಜ್ಯ ಉಪಾದ್ಯಕ್ಷ ದೇವರಾಜ್

Update: 2018-06-24 16:24 GMT

ಚಿಕ್ಕಮಗಳೂರು, ಜೂ.24 ಬಿಜೆಪಿ ನಗರ ಕಾರ್ಯದರ್ಶಿ ಮುಹಮ್ಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾದ್ಯಕ್ಷ ಎಚ್.ಎಚ್.ದೇವರಾಜ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಜಾತ್ಯತೀತ ಮನೋಭಾವವನ್ನು ಹೊಂದಿದ್ದ ಅನ್ವರ್ ಅವರ ಹತ್ಯೆ ಖಂಡನೀಯ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿರುವುದರಿಂದ ಗಣ್ಯರು ಹೇಳಿಕೆ ನೀಡುವ ಸಂದರ್ಭದಲ್ಲಿ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಲಹೆ ನೀಡಿರುವ ಅವರು, ಶಾಂತಿಗೆ ಹೆಸರಾದ ಮಲೆನಾಡಿನಲ್ಲಿ ಇಂತಹ ಪ್ರಕರಣ ನಡೆದಿರುವುದು ದುರಾದೃಷ್ಟಕರ. ಪೋಲೀಸ್ ಇಲಾಖೆ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಘಟನೆ ಹಿನ್ನೆಲೆಯಲ್ಲಿ ನಗರದ ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News