ಮಂಗಳೂರು: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ

Update: 2018-06-24 16:47 GMT

ಮಂಗಳೂರು, ಜೂ. 24: ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರಿನ ಕ್ಲಬ್‌ವೊಂದರಲ್ಲಿ ಅಕ್ರಮ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ  ಪೊಲೀಸರು ದಾಳಿ ಮಾಡಿ 51 ಮಂದಿಯನ್ನು ರವಿವಾರ ವಶಕ್ಕೆ ಪಡೆದಿದ್ದಾರೆ.

ಜೂಜಾಟಕ್ಕೆ ಬಳಸಿದ್ದ 1,19,300 ರೂ. ನಗದು ಹಾಗೂ 40 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 1,68,700 ರೂ. ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News