ದಾವಣಗೆರೆ: ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು

Update: 2018-06-24 17:05 GMT

ದಾವಣಗೆರೆ,ಜೂ.24: ತಾಂತ್ರಿಕ ದೋಷದಿಂದ ಚಲಿಸುವ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರು ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ 6 ಜನರೂ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ ನಗರದ ಎಂಸಿಸಿ ಬ್ಲಾಕ್ ನಿವಾಸಿ ಸಿದ್ದರಾಜು ಎಂಬುವವರ ಕಾರು ಇದಾಗಿದ್ದು, ಸಂಬಂಧಿಕರ ಮನೆಯಲ್ಲಿ ಪುಣ್ಯತಿಥಿ ಕಾರ್ಯದ ನಿಮಿತ್ತ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ 6 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರಿನ ಹಿಂದುಗಡೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಎಲ್ಲರೂ ಕಾರಿನಿಂದ ಇಳಿದಿದ್ದಾರೆ. ಮರುಕ್ಷಣವೇ ಕಾರಿನ ತುಂಬ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದು ಹೆಚ್ಚಿನ ಅವಘಡ ತಪ್ಪಿಸಿದರು. ಈ ಕುರಿತು ಮಲೆಬೆನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News