ಮೈಸೂರು: ಮಕ್ಕಳಾಗಲಿಲ್ಲವೆಂಬ ಕೊರಗಿನಲ್ಲಿ ಮಹಿಳೆ ಆತ್ಮಹತ್ಯೆ

Update: 2018-06-24 17:29 GMT

ಮೈಸೂರು,ಜೂ.24: ಮಕ್ಕಳಾಗದ ಕೊರಗಿನಿಂದ ಮನನೊಂದ ಗೃಹಿಣಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಗಂಗಡಹೊಸಹಳ್ಳಿ ಗ್ರಾಮದ ಶೋಭಾ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರನ್ನು ಎಂಟು ವರ್ಷಗಳ ಹಿಂದೆ ರಘುನಾಯ್ಕ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಶೋಭಾ ಸುಮಂಗಲಿ ಸಿಲ್ಕ್ಸ್‍ನಲ್ಲಿ ಕೆಲಸ ಮಾಡುತ್ತಿದ್ದಳು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಈ ನಡುವೆ ಮಕ್ಕಳಾಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಜಾರಿದ್ದ ಶೋಭಾ ಮನನೊಂದು ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News