ನಿಪ್ಪಾಣಿ: ಟಯರ್ ಸ್ಫೋಟಗೊಂಡು ಜೀಪಿಗೆ ಢಿಕ್ಕಿ ಹೊಡೆದ ಮಿನಿ ಲಾರಿ; ನಾಲ್ವರು ಮೃತ್ಯು

Update: 2018-06-25 06:08 GMT

ಬೆಳಗಾವಿ, ಜೂ.25: ಚಲಿಸುತ್ತಿದ್ದ ವೇಳೆ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿಯೊಂದು ಜೀಪಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಮೃತರನ್ನು ಮಿನಿ ಲಾರಿ ಚಾಲಕ ರಮೇಶ್, ಜೀಪಿನಲ್ಲಿದ್ದ ನದೀಂ, ಶಬ್ಬೀರ್ ಹಾಗೂ ರಾಜಾ ಮುಹಮ್ಮದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಪ್ಪಾಣಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್ತಾಗಿ ಮಿನಿ ಲಾರಿಯ ಟಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎದುರಿನಿಂದ ಬರುತ್ತಿದ್ದ ಜೀಪಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.

ಇದರಿಂದ ಲಾರಿ ಚಾಲಕ ರಮೇಶ್ ಸೇರಿದಂತೆ ಜೀಪಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News