ಬಂಟ್ವಾಳ: ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
Update: 2018-06-25 06:56 GMT
ಬಂಟ್ವಾಳ, ಜೂ. 25: ಬೆಂಕಿ ಹಚ್ಚಿಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮೂಡುಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೂಡು ನಡು ಗ್ರಾಮದ ದಡ್ಡಲಕಾಡು ಸಮೀಪದ ಪವಾರಿಪಲ್ಲ ನಿವಾಸಿ ದಿ. ದಾಮೋದರ ಎಂಬವರ ಪುತ್ರಿ ಪವಿತ್ರಾ(20) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಇವರು ಇಂದು ಬೆಳಗ್ಗೆ ಅಡುಗೆ ಕೋಣೆಯಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ತಂದೆ ಮತ್ತು ತಾಯಿಯನ್ನು ಕಳೆದುಕೊಂಡ ಪವಿತ್ರಾ, ಮೂಡುಗ್ರಾಮದಲ್ಲಿರುವ ತನ್ನ ಅಜ್ಜಿ ಚಂದ್ರಾವತಿಯ ಜೊತೆ ವಾಸವಾಗಿದ್ದು, ಈಕೆಯ ತಮ್ಮ ಮಾವನ ಜೊತೆಯಲ್ಲಿ ವಾಸವಾಗಿದ್ದಾನೆ.
ಪವಿತ್ರಾ ಇತ್ತೀಚೆಗೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.