ಆಸ್ತಿ ವಿವಾದ: ಮೂವರು ಸಹೋದರರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Update: 2018-06-25 08:47 GMT

ದಾವಣಗೆರೆ, ಜೂ.25: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮೂವರು ಸಹೋದರರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೀಜಗಟ್ಟೆ ಗ್ರಾಮದಲ್ಲಿ ಇಂದು ನಡೆದಿದೆ.

ಕೊಲೆಯಾದವರನ್ನು ಮಹಾಲಿಂಗಪ್ಪ(45) ಎಂದು ಗುರುತಿಸಲಾಗಿದೆ. ಜಮೀನು ವಿಚಾರವಾಗಿ ಮಹಾಲಿಂಗಪ್ಪ ಸೇರಿದಂತೆ ಮೂವರು ಸಹೋದರರ ಮಧ್ಯೆ ಜಗಳವಾಗಿದೆ. ಈ ವೇಳೆ ಮಾರಕಾಸ್ತ್ರಗಳಿಂದ ದಾಳಿಗೊಳಗಾದ ಮಹಾಲಿಂಗಪ್ಪರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸಹೋದರರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News