×
Ad

ಕಾಪು : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Update: 2018-06-25 23:54 IST

ಕಾಪು, ಜೂ.25: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಳೂರು ಬಿಕ್ರಿಗುತ್ತು ಎಂಬಲ್ಲಿ ಜೂ.24ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಕುಂಭಾಶಿ ಗ್ರಾಮದ ಕೊರವಡಿಯ ರಮೇಶ್(50) ಎಂದು ಗುರುತಿಸಲಾಗಿದೆ. ಇವರು ಬಿಕ್ರಿಗುತ್ತು ಸುಂದರ್ ಹೆಗ್ಡೆಯವರ ತೆಂಗಿನ ಮರದಿಂದ ತೆಂಗಿನ ಕಾಯಿ ತೆಗೆಯುವಾಗ ಆಕಸ್ಮಿಕವಾಗಿ ಆಯ ತಪ್ಪಿನೆಲಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News