ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2018-06-26 18:15 GMT

ಬೈಂದೂರು, ಜೂ.26: ಬೈಂದೂರು ಕೆಳನಾಕಟ್ಟೆ ಎಂಬಲ್ಲಿ ಜೂ.24ರಂದು ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ರಾಮ ಭಂಡಾರಿ ಎಂಬವರು ಮನೆಗೆ ಬೀಗ ಹಾಕಿ ಹೆಂಡತಿ ಮನೆಯಾದ ಪಡುವರಿಗೆ ಹೋಗಿದ್ದು, ಈ ವೇಳೆ ಮನೆಯ ಎದುರಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಗೋದ್ರೇಜ್ನಲ್ಲಿ ಇಟ್ಟಿದ್ದ ಮಾಂಗಲ್ಯ ಸರ, ನೆಕ್ಲೆಸ್, 7 ಉಂಗುರ, ಕಿವಿಯ ಸೆಟ್, 3 ಚಿನ್ನದ ಸರ ಸೇರಿದಂತೆ ಒಟ್ಟು 15 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News