ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ : ಸಚಿವ ಡಿಕೆಶಿ

Update: 2018-06-27 12:08 GMT

ಬೆಂಗಳೂರು, ಜೂ.27: "ವ್ಯಕ್ತಿ ಪೂಜೆ ಬಿಟ್ಟು ಪಕ್ಷದ ಪೂಜೆ ಮಾಡಿ " ಎಂದು ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ.

ಸದಾಶಿವನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ “ಪಕ್ಷದ ವಿರುದ್ಧ ಯಾರೂ ಮಾತನಾಡುವಂತಿಲ್ಲ. ಇದು ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ’’ಎಂದರು.

ಮೈತ್ರಿ ಸರಕಾರ 5  ವರ್ಷ ಫೂರ್ಣಗೊಳಿಸುತ್ತದೆ.ಇದರಲ್ಲಿ ಯಾವುದೇ ಅನುಮಾನ ಬೇಡ.  ಮಾಜಿ  ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ  ಗಮನ ಸೆಳೆದಾಗ ಅವರ ಮಾತಿನಿಂದ ಯಾವುದೇ ಪರಿಣಾಮ ಆಗಲ್ಲ. ಸರಕಾರದ ಮೇಲೆ ಪರಿಣಾಮ ಬೀರಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News