ಮಾಜಿ ಸಿಎಂ ಸಿದ್ದರಾಮಯ್ಯ ಜೂ.28 ರಂದು ಬೆಂಗಳೂರಿಗೆ ವಾಪಸ್
Update: 2018-06-27 15:08 GMT
ಬೆಂಗಳೂರು, ಜೂ. 27: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಜೂ.28) ರಾತ್ರಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಬೆಂಗಳೂರಿಗೆ ಹೊರಡುವ ಮುನ್ನ ಮಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.
ಸಚಿವರಾದ ರಮೇಶ್ ಜಾರಕಿಹೊಳಿ, ಸಂಸದ ಬಿ.ವಿ.ನಾಯಕ್, ಶಾಸಕರಾದ ನಾರಾಯಣರಾವ್, ಪ್ರತಾಪ್ ಗೌಡ, ಬಸವರಾಜ ದದ್ದಲ್, ನಾಗೇಂದ್ರ ಸೇರಿದಂತೆ ಇನ್ನಿತರರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.