×
Ad

ಉಳ್ಳಾಲ: ಯುವಕನಿಗೆ ತಂಡದಿಂದ ಹಲ್ಲೆ

Update: 2018-06-29 23:52 IST

ಉಳ್ಳಾಲ, ಜೂ. 29: ಯುವನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಶುಕ್ರವಾರ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ ಅಕ್ಕರೆಕೆರೆ ನಿವಾಸಿ ವೆಂಕಟೇಶ್ (34) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಅವರು ಮಾಸ್ತಿಕಟ್ಟೆಯ ಅಂಗಡಿಯೊಂದರ ಬಳಿ ನಿಂತಿದ್ದಾಗ ಅಪರಿಚಿತರಿಬ್ಬರು ಬಂದು ನಿನ್ನ ತಮ್ಮ ನಮ್ಮ ವಿರುದ್ಧ ನೀಡಿರುವ ದೂರನ್ನು ವಾಪಾಸ್ ಪಡೆದುಕೊಳ್ಳಬೇಕು ಇಲ್ಲದಿದ್ದಲ್ಲಿ ನಿನ್ನನ್ನು ಕೊಲ್ಲುತ್ತೇನೆ ಎಂದು ಚೂರಿಯನ್ನು ಎದೆಗೆ ಇಟ್ಟು ಬಳಿಕ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಸಹಾಯಕ್ಕೆ ಆಗಮಿಸಿದಾಗ ಆರೋಪಿಗಳಿಬ್ಬರು ಪರಾರಿಯಾದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News