ಅನುದಾನ ಬಿಡುಗಡೆ ಮಾಡಲು ಕೋರಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

Update: 2018-06-30 13:49 GMT

ಬೆಂಗಳೂರು, ಜೂ. 30: ಕೆರೆ ತುಂಬಿಸಲು 12 ಕೋಟಿ ರೂ.ಅನುದಾನ ಮಂಜೂರು ಮಾಡಿ, ಜವಳಿ ಪಾರ್ಕ್ ನಿರ್ಮಿಸಿ, ನನ್ನ ಕ್ಷೇತ್ರದ ನೇಕಾರರು ಗುಳೆ ಹೋಗುವುದನ್ನು ತಪ್ಪಿಸಬೇಕೇಂದು ಕೋರಿ ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ, ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಕೋರಿ 5ದಿನಗಳ ಅವಧಿಯಲ್ಲಿ 2ಪತ್ರ ಬರೆದಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ವತಿಕೆರೆ, ಗಂಜಿಕೆರೆ, ಹಿರೆಕೆರೆಗಳಿಗೆ ಮಲಪ್ರಭಾ ನದಿ(ಅಸಂಗಿ) ಬ್ಯಾರೇಜ್‌ನಿಂದ ನೀರು ತುಂಬಿಸುವ ಯೋಜನೆಗೆ 12ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿ ದುಡಿಯುವ ನೇಕಾರರ ವಲಸೆಯನ್ನು ತಪ್ಪಿಸಲು ಜವಳಿ ಪಾರ್ಕ್, ಪವರ್ ಲೂಮ್ ಪಾಕ್ ಹಾಗೂ ಸಿದ್ಧ ಉಡುಪು ಕಾರ್ಖಾನೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News