ಗ್ರಾಮಾಂತರ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಬದ್ಧ: ಶಾಸಕ ಗೌರಿಶಂಕರ್

Update: 2018-07-01 11:42 GMT

ತುಮಕೂರು,ಜು.01: ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಬದ್ಧವಾಗಿದ್ದು, ಬಜೆಟ್ ಅಧಿವೇಶನ ಮುಗಿನ ನಂತರ ಕ್ಷೇತ್ರದ ಅಭಿವೃದ್ಧಿ ವೇಗ ಹೆಚ್ಚಲಿದೆ ಎಂದು ಗ್ರಾಮಾಂತರ ಶಾಸಕ ಡಿ..ಸಿ.ಗೌರಿಶಂಕರ್ ತಿಳಿಸಿದ್ದಾರೆ.

ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೊತ್ತಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಾಂತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಅಗತ್ಯವಾದ ಮೂಲ ಮೂಲ ಸೌಕರ್ಯ ಕಲ್ಪಿಸಲು ಬದ್ಧನಿದ್ದು, ಕ್ಷೇತ್ರ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಬೇಕಿದೆ. ಈಗಾಗಲೇ ಹಲವು ಭಾಗಗಳಲ್ಲಿ ಸರಕಾರಿ ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ಹಂತ ಹಂತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಕ್ಷೇತ್ರ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದ ಅವರು, ಗ್ರಾಮಸ್ಥರ ಮನವಿ ಸ್ವೀಕರಿಸಿ ಆದ್ಯತೆ ಮೇರೆಗೆ ಗ್ರಾಮಕ್ಕೆ ಸಿಸಿ ರಸ್ತೆ ಕಾಮಗಾರಿ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ಜಯಕೃಷ್ಣ, ಮುಖಂಡರಾದ ಪ್ರವೀಣ್.ಡಿ. ಗೌರಮ್ಮ, ಹಾಲನೂರು ಆನಂತ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News