ಮಕ್ಕಳ ಅಪಹರಣ ವದಂತಿ: ಗ್ರಾಮಸ್ಥರಿಂದ ಐವರ ಹತ್ಯೆ

Update: 2018-07-01 13:39 GMT

ಮುಂಬೈ, ಜು. 1: ಮಕ್ಕಳ ಅಪಹರಣಕಾರರು ಎಂದು ಶಂಕಿಸಿ ಐವರನ್ನು ಥಳಿಸಿ ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ರವಿವಾರ ಸಂಭವಿಸಿದೆ.

‘‘ರೈನ್‌ಪಾಡದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್‌ನಿಂದ ಐವರು ಇಳಿದಿದ್ದಾರೆ. ಅವರಲ್ಲಿ ಒಬ್ಬರು ಹೆಣ್ಣು ಮಗುವಿನೊಂದಿಗೆ ಮಾತನಾಡಿದ್ದಾರೆ. ಇದನ್ನು ಕಂಡು ವಾರದ ಸಂಡೇ ಬಜಾರ್‌ನಲ್ಲಿ ಸೇರಿದ್ದ ಗ್ರಾಮಸ್ಥರು ಐವರನ್ನು ಥಳಿಸಿ ಹತ್ಯೆಗೈದಿದ್ದಾರೆ.’’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಕ್ಕಳ ಅಪಹರಣಕಾರರು ಇದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ವದಂತಿ ಹಬ್ಬಿತ್ತು ಎಂದು ಅವರು ತಿಳಿಸಿದ್ದಾರೆ. ಮೃತದೇಹಗಳನ್ನು ಸಮೀಪದ ಪಿಂಪಾಲ್ನರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News